ಇದೇ ವೇಳೆ ಸಿಬಿಐ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡ ಜೇಟ್ಲಿ, 'ಎಲ್ಲ ಸಿಬಿಐ ಅಧಿಕಾರಿಗಳು, ವಿಶೇಷವಾಗಿ ಇಬ್ಬರು ಅಗ್ರ ಅಧಿಕಾರಿಗಳು ಸೀಝರ್ ನ ಪತ್ನಿ ಇದ್ದಂತೆ ಮತ್ತು ಶಂಕಾತೀತರಾಗಿರಬೇಕು. ಇತ್ತೀಚಿನ ಬೆಳವಣಿಗೆಗಳು ಸಿಬಿಐನ ವರ್ಚಸ್ಸನ್ನು ಕುಂದಿಸಿವೆ ಮತ್ತು ಇದೇ ಕಾರಣದಿಂದ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೇಂದ್ರ ಸರ್ಕಾರ ಅವರನ್ನು ರಜೆಯಲ್ಲಿ ಕಳುಹಿಸಿದೆ. ವಿಚಾರಣೆ ಪೂರ್ಣಗೊಳಿಸಲು ಎರಡು ವಾರಗಳ ಗಡುವು ವಿಧಿಸಿರುವ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವು ತನಿಖೆಯ ನ್ಯಾಯಬದ್ಧ ಮಾನದಂಡವನ್ನು ಇನ್ನಷ್ಟು ಬಲಗೊಳಿಸುತ್ತದೆ ಮತ್ತು ನಿವೃತ್ತ ನ್ಯಾಯಾಧೀಶರ ನೇಮಕವು ನ್ಯಾಯಯುತ ವಿಚಾರಣೆಯನ್ನು ಖಚಿತಗೊಳಿಸುತ್ತದೆ ಎಂದು ಜೇಟ್ಲಿ ಹೇಳಿದರು.