ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಳೆದ ಆಗಸ್ಟ್ 28ರಂದು ಕವಿ ವರವರ ರಾವ್ ಸೇರಿದಂತೆ ಗೌತಮ್ ನವಲಖಾ, ಅರುಣ್ ಫೆರೇರಾ, ವೆರ್ನೊನ್ ಗೊನ್ಸಾಲ್ವೆಸ್, ಸುಧಾ ಭಾರದ್ವಾಜ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದರು. ಗೌತಮ್ ನವಲಖಾ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದು, ಕವಿ ವರವರರಾವ್ ಅವರ ಗೃಹ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.