ಶಬರಿಮಲೆ ವಿವಾದ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ರಾಹುಲ್ ಈಶ್ವರ್ ಮತ್ತೆ ಬಂಧನ

ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ.
ರಾಹುಲ್ ಈಶ್ವರ್
ರಾಹುಲ್ ಈಶ್ವರ್
ತಿರುವನಂತಪುರಂ: ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ. 
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವುದಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ರಾಹುಲ್ ಈಶ್ವರ್ ಸಕ್ರಿಯರಾಗಿದ್ದರು. ಅಕ್ಟೋಬರ್ ನಲ್ಲಿ ಬಂಧನಕ್ಕೊಳಗಾಗಿರುವ ಪ್ರತಿಭಟನಾ ನಿರತರ ಸಂಖ್ಯೆ 3,346 ಕ್ಕೆ ಏರಿಕೆಯಾಗಿದೆ.  
ಮಹಿಳೆಯರ ಪ್ರವೇಶವನ್ನು ವಿರೋಧಿಸಿದ ಸುಮಾರು 3,345 ಪ್ರತಿಭಟನಾ ನಿರತರನ್ನು ಬಂಧಿಸಲಾಗಿದ್ದು, 517 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com