ಪಣಜಿ : ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅಕ್ಟೋಬರ್ 14 ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡಿಮೆ ಎಂಬ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.
ಮುಖ್ಯಮಂತ್ರಿ ಪರಿಕ್ಕರ್ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ವಕ್ತಾರ ಜಿತೇಂದ್ರ ದೇಶಪ್ರಭು ಸುದ್ದಿಗಾರರಿಗೆ ಹೇಳಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಅಕ್ಟೋಬರ್ 14 ರಿಂದ ಗೋವಾಕ್ಕೆ ಕರೆದುಕೊಂಡು ಬಂದ ನಂತರ ಪರಿಕ್ಕರ್ ಏಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಖಾಸಗಿ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಯೇ ವೈದ್ಯರು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲವೂ ಅಲ್ಲಿಯೇ ಇದ್ದು, ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.
Advertisement