ಗೋವಾ ಮುಖ್ಯಮಂತ್ರಿ ಪರಿಕ್ಕರ್ ಬದುಕಿರುವ ಸಾಧ್ಯತೆ ಕಡಿಮೆ : ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ

ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅಕ್ಟೋಬರ್ 14 ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡಿಮೆ ಎಂಬ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.
ಪರಿಕ್ಕರ್
ಪರಿಕ್ಕರ್
Updated on

ಪಣಜಿ :  ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅಕ್ಟೋಬರ್ 14 ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡಿಮೆ ಎಂಬ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.

ಮುಖ್ಯಮಂತ್ರಿ ಪರಿಕ್ಕರ್ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ವಕ್ತಾರ ಜಿತೇಂದ್ರ ದೇಶಪ್ರಭು   ಸುದ್ದಿಗಾರರಿಗೆ ಹೇಳಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಅಕ್ಟೋಬರ್ 14 ರಿಂದ ಗೋವಾಕ್ಕೆ ಕರೆದುಕೊಂಡು ಬಂದ ನಂತರ ಪರಿಕ್ಕರ್ ಏಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಖಾಸಗಿ ನಿವಾಸದಲ್ಲಿ  ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಯೇ ವೈದ್ಯರು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲವೂ  ಅಲ್ಲಿಯೇ ಇದ್ದು, ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ಪರಿಕ್ಕರ್ ಗೈರು ಹಾಜರಿ ಸಂದರ್ಭದಲ್ಲಿ ಅವರ ಅಧಿಕಾರಿಗಳು ಕಾನೂನುಬಾಹಿರ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಹೇಳಿಕೆ  ಹತಾಶೆಯಿಂದ ಕೂಡಿದ್ದು, ಕೆಳಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com