ಸೋಮವಾರ ರಾತ್ರಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಹುಲ್ ಗಾಂಧಿ ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರನ್ನು ವ್ಯಾಪಂ ಹಾಗೂ ಪನಾಮಾ ಪೇಪರ್ಸ್ ಹಗರಣದಲ್ಲಿ ತಳುಕು ಹಾಕುತ್ತಿದ್ದು ಇವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ್ದರು.ಈ ಕುರಿತಂತೆ ಟ್ವೀಟ್ ಮಾಡಿದ್ದ ಚೌಹಾಣ್ ತಾನು ರಾಹುಲ್ ವಿರುದ್ಧ ಕ್ರಿಮಿನಲ್ ಮಾನನ್ಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇದು ಕಾನೂನು ವಿಚಾರಣೆಯಲ್ಲಿ ತೀರ್ಮಾನವಾಗಲಿ ಎಂದಿದ್ದರು.