ಈಗಾಗಲೇ ಸರ್ದಾರ್ ವಲ್ಲಭಭಾಯ್ ಪಟೇಲರ ಏಕತೆಯ ಪ್ರತಿಮೆ ಉದ್ಘಾಟನೆಯಾಗಿದ್ದರೂ, ಸರ್ಕಾರದ ಸ್ಥಳೀಯ ಬುಡಕಟ್ಟು ಸಮುದಾಯಗಳ ವಿರೋಧ ಎದುರಿಸುತ್ತಿದೆ. ಪ್ರತಿಮೆ ಮತ್ತು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಇವರ ಮನೆ ಮತ್ತು ಕೃಷಿ ಭೂಮಿಯನ್ನು ಪಡೆದಿದ್ದು, ಇದಕ್ಕಾಗಿ ಇವರಿಗೆ ಸೂಕ್ತ ಪರಿಹಾರ ಮತ್ತು ಬದಲಿ ವ್ಯವಸ್ಥೆ ನೀಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೇ ಕಾರಣಕ್ಕಾಗಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಸ್ಥಳೀಯರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ನೂರಾರು ಅಮಾಯಕ ಶವಗಳ ಮೇಲೆ ಏಕತೆಯ ಪ್ರತಿಮೆ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.