ನವದೆಹಲಿ: ಏಕತೆಯ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ರ ಜನ್ಮದಿನ ನಿಮಿತ್ತ ದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರನ್ ಫಾರ್ ಯೂನಿಟಿಗೆ ಚಾಲನೆ ನೀಡಿದರು.
ದೆಹಲಿಯಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ನಿಮಿತ್ತ ಆಯೋಜನೆಯಾಗಿದ್ದ ರನ್ ಫಾರ್ ಯೂನಿಟಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಓಟದಲ್ಲಿ ಪಾಲ್ಗೊಂಡು ಓಡಿದರು. ಮತ್ತೊಂದೆಡೆ ಅತ್ತ ಭುವನೇಶ್ವರದಲ್ಲೂ ರನ್ ಫಾರ್ ಯೂನಿಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನಿ ಓಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
Home Minister Rajnath Singh and Sports Minister Rajyavardhan Singh Rathore flag off “Run for Unity” in Delhi on 143rd birth anniversary of Sardar Vallabhbhai Patel. Gymnast Dipa Karmakar among other sportsperson also present. #StatueOfUnitypic.twitter.com/9emHGaemag