ಇಂದು ಅಂದರೆ ಅಕ್ಟೋಬರ್ 31ರಂದು ಸರ್ಧಾರ್ ಪಟೇಲ್ ಅವರ 142ನೇ ಜನ್ಮದಿನಾಚರಣೆಯೂ ಹೌದು. ಇದೇ ಕಾರಣಕ್ಕೆ ಏಕೀಕರಣದ ಹರಿಕಾರನ ಸ್ಮಾರಕವನ್ನು ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ. ನರ್ಮದಾ ನದಿಯ ತಟದಲ್ಲಿ ನಿರ್ಮಾಣಗೊಂಡಿರುವ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ದೇಶಕ್ಕೆ ಸಮರ್ಪಿಸುವರು. ನಂತರ ವಾಯು ಸೇನೆಯ ಮೂರು ವಿಮಾನಗಳು ಹಾರಾಟ ನಡೆಸಿ, ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳನ್ನು ಹೊರಸೂಸುವ ಮೂಲಕ ಆಕಾಶದಲ್ಲಿ ತ್ರಿವರ್ಣ ಧ್ವಜದ ಮಾದರಿ ರಚಿಸಲಿವೆ ಎಂದು ಸರ್ಕಾರದ ವರದಿಗಳು ತಿಳಿಸಿವೆ.