ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ ರ 'ಏಕತಾ ಪ್ರತಿಮೆ' ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ ರ ‘ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.
ಏಕತೆಯ ಪ್ರತಿಮೆ ಲೋಕಾರ್ಪಣೆ
ಏಕತೆಯ ಪ್ರತಿಮೆ ಲೋಕಾರ್ಪಣೆ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ ರ ‘ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.
ಗುಜರಾತ್ ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶದ ಮೊದಲ ಉಪ ಪ್ರಧಾನಿ ಪಟೇಲ್‌ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಹೀಗಾಗಿ ಪ್ರತಿಮೆಗೆ ‘ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್‌ ಪಟೇಲ್‌ ಅವರ ಪ್ರತಿಮೆಯ ಮೂಲಕ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ‘ಏಕೀಕರಣ’ದ ಸಂದೇಶ ಸಾರಿದ್ದಾರೆ.
ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಪ್ರತಿಮೆಗೆ ಕುಂಭಾಭಿಷೇಕ ಮಾಡುವ ಮೂಲಕ ಅದನ್ನು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಟೇಲ್​ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com