ಈ ಅರ್ಜಿಯನ್ನು ಅ.10 ರಂದು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಕೆ. ಕೌಲ್ ಮತ್ತು ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠವು, ಅರ್ಜಿಗಳಲ್ಲಿ ಒಪ್ಪಂದ ಕುರಿತು ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ, 29ರೊಳಗೆ ರಫೇಲ್ ಒಪ್ಪಂದ ನಿರ್ಧಾರ ಕೈಗೊಂಡ ಪ್ರಕ್ರಿಯೆ ಕುರಿತು ಮೊಹರು ಮಾಡಿದ ಲಕೋಟೆಯಲ್ಲಿ ವಿವರ ಸಲ್ಲಿಸುವಂತೆ ಸೂಚನೆ ನೀಡಿತ್ತು.