ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ಪುಣೆ ಸೆಷನ್ಸ್ ಕೋರ್ಟ್ 10 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ಬಂಧಿತ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳಾದ ರಾಜೇಶ್ ಬಂಗೆರಾ ಮತ್ತು ಅಮಿತ್ ದೆಗ್ವಾಕರ್ ಅವರನ್ನು ಸಿಬಿಐ ವಶಕ್ಕೆ ನೀಡಿದ್ದು, ಮತ್ತೊಬ್ಬ ಆರೋಪಿ ಸಚಿನ್ ಅಂಡುರೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2013ರ ಆಗಸ್ಟ್ 20 ರಂದು ನರೇಂದ್ರ ದಾಬೋಲ್ಕರ್ ಅವರನ್ನು ಅಮಾನವೀಯವಾಗಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಬಾಂಬೆ ಹೈ ಕೋರ್ಟ್ ಆದೇಶದಂತೆ ಸಿಬಿಐ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.