ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ: ಕೇಂದ್ರ ಸೇರಿ 5 ರಾಜ್ಯಗಳಿಗೆ 'ಸುಪ್ರೀಂ' ನೋಟಿಸ್

ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on
ನವದೆಹಲಿ: ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ತಮ್ಮ ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತದ್ದು, ಈ ಕುರಿತು ಆಡಳಿತಾರೂಢ ಪಕ್ಷಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಬುರಾರಿಯ ಆಮ್ ಆದ್ಮಿ ಪಕ್ಷದ ಶಾಸಕ ಸಂಜೀವ್ ಝಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 
ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿದ್ದ ಪೀಠ, ಮಾಹಿತಿ ಮತ್ತು ಪ್ರಸಾರ ಇಲಾಖೆ, ಬಿಜೆಪಿ ಹಾಗೂ ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಾಂಡ್, ಛತ್ತೀಸ್ಗಢ ಹಾಗೂ ತೆಲಂಗಾಣ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com