ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ...
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್
ಪಾಟ್ನಾ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ. 
ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ನಲ್ಲಿ ಕಾಂಗ್ರೆಸ್, ಎನ್ಸಿಪಿ, ಹೆಚ್ಎಎಂ(ಎಸ್), ಲೋಕತಾಂತ್ರಿಕ್ ಜನತಾದಳ ಮತ್ತು ಎಲ್ಲಾ ಎಡ ಪಂಥಿಯ ಪಾರ್ಟಿಗಳು ಸ್ಪರ್ಧಿಸುತ್ತಿದ್ದು ಇದೇ ಮಹಾಘಟಬಂಧನ್ ನಲ್ಲಿ ಕನ್ಹಯ್ಯ ಕುಮಾರ್ ಸಹ ಬೆಗುಸಾರೈನಿಂದ ಸ್ಪರ್ಧಿಸಲಿದ್ದಾರೆ. 
ಮೂಲಗಳ ಪ್ರಕಾರ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಪುತ್ರ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಮುಖಂಡರು ಕನ್ಹಯ್ಯ ಕುಮಾರ್ ಬೆಗುಸಾರೈನಿಂದ ಸ್ಪರ್ಧಿಸಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ. 
ಸಿಪಿಎಂ ವತಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸಲಿದ್ದು ಈ ಮೂಲಕ ಮಹಾಘಟಬಂಧನ್ ನಲ್ಲಿ ಸಾಮಾನ್ಯ ಅಭ್ಯರ್ಥಿ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಕಠಿಣ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ರವಾನಿಸುವ ಉದ್ದೇಶ ಹೊಂದಿದ್ದೇವೆ ಎಂದು ಲಾಲೂ ಕುಟಂಬಸ್ಥರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com