ಪಟೇಲ್ ಸಮುದಾಯದ ಮೀಸಲಾತಿ, ರೈತರ ಸಾಲಮನ್ನಾ, ಪಟೇಲ್ ಸಮುದಾಯಕ್ಕಾಗಿ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾರ್ದಿಕ್ ಪಟೇಲ್ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದ್ದು, ಇದೇ ಸಂದರ್ಭದಲ್ಲಿ ಅವರ ಆರೋಗ್ಯ ಕೂಡ ಕ್ಷೀಣಿಸುತ್ತಿದೆ. ನಿನ್ನೆ ಹಾರ್ದಿಕ್ ಪಟೇಲ್ ಅವರನ್ನು ಪರೀಕ್ಷೆಸಿದ ವೈದ್ಯರು ದೇಹದ ಪ್ರಮುಖ ಅಂಗಾಂಗಳ ಸಾಮರ್ಥ್ಯ ಕುಸಿಯುತ್ತಿದೆ ಎಂದು ಎಚ್ಚರಿಕೆ ನೀಡಿದ್ದರು.