ಇತ್ತೀಚೆಗೆ ಹಳೆಯ ಆಭರಣಗಳ ನಾಪತ್ತೆ ವಿವಾದಕ್ಕೆ ಸಿಲುಕಿದ್ದ ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ ಈಗ ಹೊಸ ತಲೆನೋವೊಂದು ಶುರುವಾಗಿದ್ದು, 16ನೇ ಶತಮಾನದ ವಿಜಯನ ಸಾಮ್ರಾಜ್ಯದ ಅರಸ ಶ್ರೀ ಕೃಷ್ಣ ದೇವರಾಯ ನೀಡಿದ್ದ ಆಭರಣಗಳು ಈಗ ಎಲ್ಲಿವೆ ಎಂದು ಕೇಂದ್ರೀಯ ಮಾಹಿತಿ ಹಕ್ಕು ಆಯೋಗವು ಪ್ರಶ್ನೆ ಮಾಡಿದೆ. ಈ ಬಗ್ಗೆ ಸಿಐಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (Archaeological Survey of India), ಕೇಂದ್ರ ಸಾಂಸ್ಕೃತಿಕ ಸಚಿವಾಲಯ (Culture Ministry), ಆಂಧ್ರ ಪ್ರದೇಶ ಸರ್ಕಾರ ಮತ್ತು ಟಿಟಿಡಿ ಪ್ರಶ್ನೆ ಮಾಡಿದ್ದು, ಈ ಪ್ರಶ್ನೆ ಇದೀಗ ಹಲವು ಗೊಂದಲಕ್ಕೆ ಕಾರಣವಾಗಿದೆ.