ಸಿಧಿ: ವಿಧಾನಸಭಾ ಚುನಾವಣೆಯ ಪ್ರಯುಕ್ತ ರಾಜ್ಯ ಪ್ರವಾಸ ಕೈಗೊಂಡಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಮಧ ಪ್ರದೇಶದ ಸಿಧಿ ಜಿಲ್ಲೆಯ ಸಮೀಪ ಚುರ್ಹಾಟ್ ಎಂಬಲ್ಲಿ ನಡೆದಿದೆ.
ಸಿಎಂ ಚೌಹಾಣ್ ಅವರು ಕಲ್ಲೆಸೆತದಲ್ಲಿ ಗಾಯಗೊಂಡಿಲ್ಲ; ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಚುರ್ಹಾಟ್ ಪೊಲೀಸ್ ಇನ್ಸ್ಪೆಕ್ಟರ್ ರಾಮ್ ಬಾಬು ಚೌಧರಿ ತಿಳಿಸಿದ್ದಾರೆ.
ಚುರ್ಹಾಟ್ ಕ್ಷೇತ್ರವು ರಾಜ್ಯ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಅಜಯ್ ಸಿಂಗ್ ಅವರ ಕ್ಷೇತ್ರವಾಗಿದೆ.ಸಿಎಂ ವಾಹನದ ಮೇಲೆ ಕಲ್ಲೆಸೆತ ನಡೆದಿರುವ ಚುರ್ಹಾಟ್ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ. ದೂರದಲ್ಲಿದೆ.
ತಾಕತ್ತಿದ್ದರೆ ಬಹಿರಂಗವಾಗಿ ನನ್ನೆದುರು ಹೋರಾಡಿ ಎಂದು ವಿಪಕ್ಷ ನಾಯಕ ಅಜಯ್ ಸಿಂಗ್ ಅವರಿಗೆ ಶಿವರಾಜ್ ಸಿಂಗ್ ಚೌಹಾಣ್ ಸವಾಲು ಹಾಕಿದ್ದಾರೆ.