ನವದೆಹಲಿ : ಜಕಾರ್ತ್ ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯಲ್ಲಿ ಪದಕ ಗೆದ್ದ ದೆಹಲಿಯ ಆಟಗಾರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಗದು ಬಹುಮಾನವನ್ನು ಹೆಚ್ಚಿಸಿದೆ.
ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.
ಚಿನ್ನದ ಪದಕ ವಿಜೇತರಿಗೆ 20 ಲಕ್ಷದಿಂದ 1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 14 ಲಕ್ಷದ ಬದಲು 75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ 10 ಲಕ್ಷದಿಂದ 50 ಲಕ್ಷದವರೆಗೂ ಹೆಚ್ಚಿಸಲಾಗುವುದು ಎಂದು ಹೇಳಿದರು. ಅಲ್ಲದೇ, ಪದಕ ವಿಜೇತರಿಗೆ ನೌಕರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.
ಸೇವೆಗೆ ತಕ್ಕಂತಹ ತರಬೇತಿ ನೀಡುವ ಮೂಲಕ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದರು.
Advertisement