ಈ ವೇಳೆ ವಿಚಾರಣೆಗೆ ಹಾಜರಿದ್ದ ಪುಣೆ ಪೊಲೀಸ್ ವರಿಷ್ಠಾಧಿಕಾರಿಗಳ ಮೇಲೆ ಕಿಡಿಕಾರಿದ ಸುಪ್ರೀಂ ಕೋರ್ಟ್, ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಹೀಗಾಗಿ ನಿಮ್ಮ ಅಧಿಕಾರಿಗಳಿಗೆ ಜವಾಬ್ದಾರಿಯುತವಾಗಿ ವರ್ತಿಸುವಂತೆ ಹೇಳಿ. ಪೊಲೀಸ್ ಅಧಿಕಾರಿಗಳಿಂದ ಸುಪ್ರೀಂ ಕೋರ್ಟ್ ಸರಿಯಲ್ಲ ಎಂದು ಹೇಳುವುದನ್ನು ನಾವು ಕೇಳಲಿಚ್ಛಿಸುವುದಿಲ್ಲ ಎಂದು ಹೇಳಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ ಮಾಡಿತು.