ಇಂದು ಬೆಳಗ್ಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಸಿಎಂ ಕೆಸಿಆರ್ ಅವರು ರಾಜಭವನಕ್ಕೆ ತೆರಳಿ ಅಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭೆ ವಿಸರ್ಜಿಸುವ ಸಂಪುಟ ನಿರ್ಣಯದ ಪ್ರತಿಯನ್ನು ಸಲ್ಲಿಸಿದರು. ನಿರ್ಣಯವನ್ನು ರಾಜ್ಯಪಾಲರು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೆಸಿಆರ್ ಅವರಿಗೆ ಸೂಚಿಸಿದ್ದಾರೆ.