14 ದಿನ ಉಪವಾಸ: ಹಾರ್ದಿಕ್‌ ಪಟೇಲ್‌ ಆಸ್ಪತ್ರೆಗೆ ದಾಖಲು

ಪಾಟಿದಾರ್‌ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...
ಹಾರ್ದಿಕ್‌ ಪಟೇಲ್‌
ಹಾರ್ದಿಕ್‌ ಪಟೇಲ್‌
Updated on
ಅಹಮದಾಬಾದ್: ಪಾಟಿದಾರ್‌ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾರ್ದಿಕ್ ಪಟೇಲ್ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಅವರನ್ನು ಸೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂದಿನ 24 ಗಂಟೆಯಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ನೀರು ಸಹ ಸೇವಿಸುವುದಿಲ್ಲ ಎಂದು 25 ವರ್ಷದ ಹಾರ್ದಿಕ್ ಪಟೇಲ್ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅದರಂತೆ ನಿನ್ನೆಯಿಂದ ನೀರು ಸೇವಿಸುವುದನ್ನು ಕೂಡ ನಿಲ್ಲಿಸಿದ್ದರು. ಹೀಗಾಗಿ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾರ್ದಿಕ್ ಪಟೇಲ್ ಅವರು ಪಟಿದಾರ್ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕಳೆದ ಆಗಸ್ಟ್ 25 ರಿಂದ ಉಪವಾಸ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com