ಸಿಧು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಭಾರತಕ್ಕೆ ಮಾಡಿರುವ ಅವಮಾನ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಅವಮಾನ ಮಾಡುವುದು ಅಭ್ಯಾಸವಾಗಿಬಿಟ್ಟಿದೆ. ಇದನ್ನು ಇಡೀ ದೇಶ ಗಮನಿಸುತ್ತಿದೆ ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟನೆ ನೀಡಬೇಕೆಂದು ಶಹನವಾಜ್ ಹುಸೇನ್ ಆಗ್ರಹಿಸಿದ್ದಾರೆ.