ಫೋಟೊದಲ್ಲಿ ನೆರಳೇ ಕಾಣುತ್ತಿಲ್ಲ: ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿರುವ ರಾಹುಲ್ ಕಾಲೆಳೆದ ಕೇಂದ್ರ ಸಚಿವ

ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಟ್ರೋಲ್ ಮಾಡುತ್ತಿದ್ದರೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಾಹುಲ್
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on
ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಟ್ರೋಲ್ ಮಾಡುತ್ತಿದ್ದರೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ. 
ಫೋಟೋದಲ್ಲಿ ರಾಹುಲ್ ಗಾಂಧಿಯವರು ಜೀನ್ಸ್, ಜಾಕೆಟ್ಗಳು ಹಾಗೂ ಸ್ಪೋರ್ಟ್ಸ್ ಶೂನಲ್ಲಿ ಕಾಣಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಫೋಟೋ ಬಗ್ಗೆ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್, ಇದು ಫೋಟೋ ಶಾಪ್ ಮಾಡಲಾಗಿರುವ ಫೋಟೊ, ಫೋಟೋದಲ್ಲಿ ನೆರಳು ಕಾಣಿಸುತ್ತಲೇ ಇಲ್ಲ ಎಂದು ಹೇಳಿದ್ದಾರೆ. 
ರಾಹುಲ್ ಗಾಂಧಿ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಕುರಿತಂತೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿ ರಾಹುಲ್ ಅವರನ್ನು ಟ್ರೋಲ್ ಮಾಡಿದ್ದರು. ಇದಕ್ಕೆ ಧ್ವನಿಗೂಡಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇದು ಫೋಟೋ ಶಾಪ್ ಇಮೇಜ್ ಎಂದು ಹೇಳಿದ್ದಾರೆ.  ಆದರೆ ಮಾನಸ ಸರೋವರ ಯಾತ್ರೆ ಕುರಿತು ಫೋಟೋಗಳನ್ನು ಹಂಚಿಕೊಳ್ಳುವುದರೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಅವರು, ಕೈಲಾಸ ಪರ್ವತದ ವಿಡಿಯೋವನ್ನು ಹಂಚಿಕೊಂಡು 'ಶಿವನೇ ಬ್ರಹ್ಮಾಂಡ' ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com