ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ

ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Updated on
ಶ್ರೀನಗರ: ಜಮ್ಮು-ಕಾಶ್ಮೀರದ ಜನತೆಗೆ ವಿಶೇಷ ಸವಲತ್ತುಗಳನ್ನು, ಹಕ್ಕುಗಳನ್ನು ನೀಡುವ ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ. 
ಆರ್ಟಿಕಲ್ 35ಎ ಅಡಿಯಲ್ಲಿ ಜಮ್ಮು-ಕಾಶ್ಮೀರದ ಸ್ಥಳೀಯ ಜನತೆಗೆ ವಿಶೇಷ ಸವಲತ್ತುಗಳನ್ನು ನೀಡಲಾಗಿದ್ದು, ಹೊರ ರಾಜ್ಯಗಳಿಂದ ಯಾರೂ ಸಹ ಜಮ್ಮು-ಕಾಶ್ಮೀರದಲ್ಲಿ ಆಸ್ತಿಗಳನ್ನು ಖರೀದಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ಈ ಆರ್ಟಿಕಲ್ 35 ಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದ್ದು, ಆರ್ಟಿಕಲ್ ನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ. 
ಒಂದು ವೇಳೆ ಕೇಂದ್ರ ಸರ್ಕಾರವೇನಾದರೂ ಆರ್ಟಿಕಲ್ 35ಎನ್ನು ದುರ್ಬಲಗೊಳಿಸುವುದಕ್ಕೆ ಚಿಂತಿಸಿದರೆ ನಾವು ನಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ. ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ, ಯಾವುದಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com