ಈ ನಡುವೆ ಶಂಕಿತ ಉಗ್ರರು ಶ್ರೀನಗರದ ಹಜ್ರತ್ಬಾಲ್ ಎಂಬ ಪ್ರದೇಶದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಯುವಕ ಆಸೀಫ್ ನಾಜೀರ್ ದಾರ್ ಎಂಬಾತ ಸಾವನ್ನಪ್ಪಿದ್ದಾನೆ. ಮೃತಪಟ್ಟ ಯುವಕ ಆಸೀಫ್, ಜಾಕೀರ್ ಮೂಸಾ ರಚನೆ ಮಾಡಿರುವ ಅಲ್ ಖೈದಾ ಕಾಶ್ಮೀರ ಉಗ್ರ ಸಂಘಟನೆಗೆ ಸೇರಿದ ಅನ್ಸಾರಿ ಸಂಬಂಧಿಕನೆಂದು ಹೇಳಲಾಗುತ್ತಿದೆ.