ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಉತ್ತರ ಪ್ರದೇಶದ ಸಚಿವ ಮುಕುಟ್ ಬಿಹಾರಿ ವರ್ಮಾ ಅವರನ್ನು ಪತ್ರಕರ್ತರು ಮಾತನಾಡಿಸಿದ್ದು, ಈ ವೇಳೆ ರಾಮಮಂದಿರ ತೀರ್ಪಿನ ಕುರಿತು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸುವ ಭರದಲ್ಲಿ ಸಚಿವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡಿದ್ದು, ಸುಪ್ರೀಂ ಕೋರ್ಟ್ ನಮ್ಮದೇ. ಹೀಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಃಸಿದ್ಧ. ರಾಮ ಮಂದಿರ ನಿರ್ಮಾಣಕ್ಕೆ ನಾವು ಸಂಕಲ್ಪ ತೊಟ್ಟಿದ್ದೇವೆ. ಅದಕ್ಕಾಗಿಯೇ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.