ಸುಪ್ರೀಂ ಕೋರ್ಟ್ ನಮ್ಮದು: ಯುಪಿ ಸಚಿವರ ವಿವಾದಾತ್ಮಕ ಹೇಳಿಕೆ, ಬಳಿಕ ಸ್ಪಷ್ಟನೆ

ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಬದ್ಧವಾಗಿದೆ. ಏಕೆಂದರೆ ಸುಪ್ರೀಂ ಕೋರ್ಟ್ ನಮ್ಮದು..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಲಖನೌ: ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಬದ್ಧವಾಗಿದೆ. ಏಕೆಂದರೆ ಸುಪ್ರೀಂ ಕೋರ್ಟ್ ನಮ್ಮದು ಎಂದು ಉತ್ತರ ಪ್ರದೇಶ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉತ್ತರ ಪ್ರದೇಶ ಸಹಕಾರಿ ಸಚಿವ ಮುಕುತ್ ಬಿಹಾರಿ ವರ್ಮಾ ವಿವಾದಾತ್ಮಕ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸ್ಪಷ್ಟನೆ ನೀಡಿದ ಸಚಿವರು, ನಾನು ಆ ಅರ್ಥದಲ್ಲಿ ಹೇಳಿಲ್ಲ. ಸುಪ್ರೀಂ ಕೋರ್ಟ್ ಈ ದೇಶದ ಜನರಿಗೆ ಸೇರಿದ್ದು ಎಂಬ ಅರ್ಥದಲ್ಲಿ ಹೇಳಿರುವುದಾಗಿ ಸಮಜಾಯಿಸಿ ನೀಡಿದ್ದಾರೆ.
ಕಳೆದ ಶನಿವಾರ ಬಹ್ರೈಚ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವರ್ಮಾ ಅವರು, ನಾವು ರಾಮ ಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಮಂದಿರ ನಿರ್ಮಾಣಕ್ಕಾಗಿ ನಾವು ಸಂಕಲ್ಪ ತೊಟ್ಟಿದ್ದೇವೆ ಎಂದು ಹೇಳಿದ್ದರು. ಈ ವೇಳೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ವರದಿಗಾರರು ಪ್ರಶ್ನಿಸಿದಾಗ, ಸುಪ್ರೀಂ ಕೋರ್ಟ್ ಸಹ ನಮ್ಮದೇ, ನ್ಯಾಯಾಂಗವೂ ನಮ್ಮದೇ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com