ಕಳೆದ ಶನಿವಾರ ಬಹ್ರೈಚ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವರ್ಮಾ ಅವರು, ನಾವು ರಾಮ ಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಮಂದಿರ ನಿರ್ಮಾಣಕ್ಕಾಗಿ ನಾವು ಸಂಕಲ್ಪ ತೊಟ್ಟಿದ್ದೇವೆ ಎಂದು ಹೇಳಿದ್ದರು. ಈ ವೇಳೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ವರದಿಗಾರರು ಪ್ರಶ್ನಿಸಿದಾಗ, ಸುಪ್ರೀಂ ಕೋರ್ಟ್ ಸಹ ನಮ್ಮದೇ, ನ್ಯಾಯಾಂಗವೂ ನಮ್ಮದೇ ಎಂದು ಹೇಳಿದ್ದರು.