ಈ ಕುರಿತಂತೆ ಮಾತನಾಡಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಅಂತರಾಷ್ಟ್ರೀಯ ಬಿಕ್ಕಟ್ಟಿನಿಂದಾಗೂ ತೈಲ ಬೆಲೆ ಏರಿಕೆ ಕಂಡಿದ್ದು, ಈ ಸಂಕಷ್ಟ ತಾತ್ಕಾಲವಷ್ಟೇ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣಕ್ಕೆ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ್ ಬಂದ್ ವಿಫಲಗೊಂಡಿದೆ ಎಂದು ಹೇಳಿದ್ದಾರೆ.