ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಪ್ತಿ, ಜಮ್ಮು-ಕಾಶ್ಮೀರದ ಶ್ರೇಷ್ಠತೆ ಎತ್ತಿ ಹಿಡಿಯುವ ಸಂವಿಧಾನದ 35 ಎ ಪರಿಚ್ಚೇದ ಕತ್ತಿ ನಮ್ಮ ತಲೆ ಮೇಲೆ ತೂಗು ಹಾಕುತ್ತಿದೆ.ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗ ಚುನಾವಣೆ ನಡೆಯುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಚುನಾವಣೆ ನಡೆಸುವ ನಿರ್ಧಾರವನ್ನು ಕೇಂದ್ರಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.