ಗುಜರಾತ್: ಅಕ್ಚೋಬರ್ 31ಕ್ಕೆ ಪ್ರಧಾನಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅನಾವರಣ

ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ಸರ್ದರ್  ವಲ್ಲಭಬಾಯಿ ಪಟೇಲ್
ಸರ್ದರ್ ವಲ್ಲಭಬಾಯಿ ಪಟೇಲ್
Updated on

ಅಹಮದಾಬಾದ್: ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ  ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.

ಈ ಪ್ರತಿಮೆ 182 ಮೀಟರ್ ಎತ್ತರ ಹೊಂದಿದ್ದು, ದೇಶದ ಏಕತೆ ಹಾಗೂ ಸಾರ್ವಭೌಮತ್ವವನ್ನು ಪ್ರತಿಬಿಂಬಿಸಲಿದೆ. ಏಕತೆಯ ಸಂಕೇತವಾಗಿ ಈ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಮೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಚೀನಾದ ಶಿಲ್ಪಿಗಳಿಂದ ಗೋಪುರ ಭಾಗದ ಕೆಲಸ ನಡೆಯುತ್ತಿದೆ. ನಿರ್ಮಾಣ ಪೂರ್ಣಗೊಂಡ ನಂತರ ಏಕತೆಯ  ಪ್ರತಿಮೆಯನ್ನಾಗಿ ಕರೆಯಲಾಗುತ್ತದೆ ಎಂದಿದ್ದಾರೆ.
ಅಕ್ಟೋಬರ್ 31 ರಂದು ಸರ್ದರ್ ವಲ್ಲಭಬಾಯಿ ಪಟೇಲ್ ಜನ್ಮದಿನ ವಾರ್ಷಿಕೋತ್ಸವ  ಇರುವುದರಿಂದ ಅಕ್ಟೋಬರ್ 25 ರೊಳಗೆ ಪ್ರತಿಮೆ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com