ಅಲ್ಲದೆ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಸೇರಿ ಪಕ್ಷದ ಪ್ರತಿಭಟನಾ ಮೆರವಣಿಗೆಯಲ್ಲೂ ಪಾಲ್ಗೊಳ್ಳುವ ಮೂಲಕ ರಾಹುಲ್ ಬಂದ್ ಗೆ ಬೆಂಬಲ ನೀಡಿದರು. ಇಂದು ಬೆಳಗ್ಗೆ ಪಕ್ಷದ ಹಿರಿಯ ಮುಖಂಡರಾದ ಗುಲಾಂನಬಿ ಆಜಾದ್, ಅಶೋಕ್ ಗೆಹ್ಲೋಟ್ ಮತ್ತು ಆನಂದ್ ಶರ್ಮಾ ಅವರೊಂದಿಗೆ ರಾಜ್ ಘಾಟ್ ಗೆ ತೆರಳಿದ್ದ ರಾಹುಲ್ ಅಲ್ಲಿ ಮಹಾತ್ಮಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅಲ್ಲಿಯೇ ಸಮೀಪವಿದ್ದ ಪೆಟ್ರೋಲ್ ಬಂಕ್ ಗೆ ತೆರಳಿದ ರಾಹುಲ್ ಅಲ್ಲಿ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡರು.