ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ ಸಂವಾದ

ನವದೆಹಲಿ: ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಲ್ಲದೇ,  ಮಾನ್ಯತೆ ಪಡೆದ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಪ್ರಮುಖ ಸಾಮಾಜಿಕ ಸುರಕ್ಷತಾ ಯೋಜನೆ ವ್ಯಾಪ್ತಿಗೊಳಪಡಿಸಲಾಗುವುದು, ಪ್ರಧಾನಮಂತ್ರಿ ಜೀವನ್  ಜ್ಯೋತಿ ಭೀಮಾ ಹಾಗೂ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯಡಿ ಉಚಿತ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾಮಾಜಿಕ ಆರೋಗ್ಯ  ಕಾರ್ಯಕರ್ತೆಯರು ವಿಮೆಗಾಗಿ ಯಾವುದೇ ಪ್ರೀಮಿಯಂ ಹಣ ಪಾವತಿಸುವಂತಿಲ್ಲ. ಆಕಸ್ಮಿಕ ಘಟನೆಗಳ ಸಂದರ್ಭದಲ್ಲಿ  4 ಲಕ್ಷ ರೂ ಪಡೆಯಲಿದ್ದಾರೆ ಎಂದು  ಆಶಾ, ಅಂಗನವಾಡಿ ಕಾರ್ಯಕರ್ತೆಯರ ಜೊತೆಗಿನ ಸಂವಾದದಲ್ಲಿ ನರೇಂದ್ರ ಮೋದಿ ಇಂದು  ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com