ರಾಜ್ಯದಲ್ಲಿ ನಡೆಯಲಿರುವ ಮುಂಬರುವ ಪುರಸಭೆ ಮತ್ತು ಪಂಚಾಯತ್ ಚುನಾವಣೆ ಬಗ್ಗೆ ರಾಜ್ಯಪಾಲರೊಂದಿಗೆ ರಾಮ್ ಮಾಧವ್ ಚರ್ಚಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಕ್ಷಗಳು ಈಗಾಗಲೇ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿವೆ. ಚುನಾವಣೆಯಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಕಾಂಗ್ರೆಸ್ ಸೆ.12 ರಂದು ನಿರ್ಧಾರ ಪ್ರಕಟಿಸಲಿದೆ.