ದೆಹಲಿ : ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ.
ಸಂಸತ್ ಸದಸ್ಯರ ಅಶಿಸ್ತಿಗೆ ಸಂಬಂಧಿಸಿದ ದೂರುಗಳನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ. ಸದಸ್ಯರು ಶಿಸ್ತು , ಅಶಿಸ್ತಿಗೆ ಸಂಬಂಧಿಸಿದಂತೆ ಈ ಸಮಿತಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಮುಕ್ತ ಅವಕಾಶ ಹೊಂದಿದ್ದು, ಸರಿಹೊಂದುವಂತಹದ್ದನ್ನು ಶಿಫಾರಸ್ಸು ಮಾಡಬಹುದು ಎಂದು ಲೋಕಸಭಾ ಬುಲಿಟಿನ್ ನಲ್ಲಿ ಹೇಳಲಾಗಿದೆ.