ಹೌದು.. ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ್ದ ಶತಮಾನದ ಭೀಕರ ಪ್ರವಾಹದ ಸಂದರ್ಭದಲ್ಲಿ ಭಾರತೀಯ ಸೇನೆ, ಎನ್ ಡಿಆರ್ ಎಫ್ ತಂಡ ಹಾಗೂ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನೂರಾರು ಮೀನುಗಾರರು ಕೂಡ ಸ್ವಯಂ ಪ್ರೇರಿತರಾಗಿ ರಕ್ಷಣಾ ಕಾರ್ಯಾಚರಣೆಗೆ ಧುಮುಕಿಸಿದ್ದರು. ಈ ಪೈಕಿ ಜೈಸೆಲ್ ಎಂಬ ಮೀನುಗಾರ ಅಪಾಯದಲ್ಲಿದ್ದ ಮಹಿಳೆಯರನ್ನು ರಕ್ಷಿಸುವ ಸಲುವಾಗಿ ತನ್ನ ಬೋಟ್ ಚಲಾಯಿಸಿದ್ದ. ಅಲ್ಲದೆ ಮಹಿಳೆಯರು ಬೋಟ್ ಹತ್ತಲು ಕಷ್ಟವಾದಾಗ ತನ್ನ ಬೆನ್ನನ್ನೇ ಮೆಟ್ಟಿಲಾಗಿಸಿ ಮಹಿಳೆಯರಿಗೆ ನೆರವಾಗಿದ್ದ.