19 ದಿನಗಳ ಬಳಿಕ ಅನಿರ್ದಿಷ್ಠಾವಧಿ ಉಪವಾಸ ಅಂತ್ಯಗೊಳಿಸಿದ ಹಾರ್ದಿಕ್ ಪಟೇಲ್

ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್
Updated on
ಅಹಮದಾಬಾದ್: ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. 
ಪಟೇಲ್ ಸಮುದಾಯದ ಎರಡು ಮುಖ್ಯ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಾದ ಖೋಡಾಲ್ ಧಾಮ್ ಹಾಗೂ ಉಮ್ಯಾಧಾಮ್ ಗಳ ಮುಖಂಡರಾದ ಹಾರ್ಡಿಕ್ ಅವರ ನಿಕಟ ಸಹಾಯಕ ಮತ್ತು ಪಟಿದರ್ ಅನಾಮತ್ ಆಂದೋಲನ ಸಮಿತಿಯ ಸಂಚಾಲಕ ಮನೋಜ್ ಪನಾರಾ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ.
ಪಟೇಲ್ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು, ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಹಾರ್ದಿಕ್ ಪಟೇಲ್ ಆಗಸ್ಟ್ 25ರಿಂದ ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದರು.
ಅಲ್ಲದೆ 2015ರಲ್ಲಿ ನಡೆದ ಕಾನೂನು ಬಾಹಿರ ಘಟನೆಯಲ್ಲಿ ಬಂಧಿತನಾಗಿದ್ದ ಹಾರ್ದಿಕ್ ಆಪ್ತ ಅಲ್ಪೇಶ್ ಕಟಾರಿಯಾ ಅವರನ್ನು ಬಿಡುಗಡೆಗೊಳಿಸಬೇಕೆಂದು ಸಹ ಹಾರ್ದಿಕ್ ಪಟೇಲ್ ಬೇಡಿಕೆ ಇಟ್ಟಿದ್ದರು.
ಕಳೆದ 14 ದಿನಗಳಲ್ಲಿ ಸರ್ಕಾರವು ಹಾರ್ಡಿಕ್ ಜೊತೆ ಮಾತುಕತೆ ನಡೆಸಲು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ. ಆದರೆ ಇದೇ ವೇಳೆ ಗುಜರಾತಿನ ಇಂಧನ ಸಚಿವ ಸೌರಬ್ ಪಟೇಲ್ ಸರ್ಕಾರದೊಡನೆ ಮಾತುಕತೆ ನಡೆಸಲು ಬಯಸುವವರಿಗೆ "ಬಾಗಿಲು ತೆರೆದಿದೆ" ಎಂದು ಹೇಳಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com