ಉತ್ತರ ಪ್ರದೇಶ: ರಾಸಾಯನಿಕ ಕಾರ್ಖಾನೆಯಲ್ಲಿ ಮೀಥೇನ್ ಗ್ಯಾಸ್ ಸಿಲಿಂಡರ್ ಸ್ಫೋಟ, 6 ಸಾವು, ಹಲವರಿಗೆ ಗಾಯ!

ಉತ್ತರ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಮೀಥೇನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು 6 ಜನರು ಮೃತಪಟ್ಟಿದ್ದು, ಹಲವರಿಗೆ ಗಾಯಗಳುಂಟಾಗಿವೆ.
ಸ್ಫೋಟ (ಸಂಗ್ರಹ ಚಿತ್ರ)
ಸ್ಫೋಟ (ಸಂಗ್ರಹ ಚಿತ್ರ)
ಉತ್ತರ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಮೀಥೇನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು 6 ಜನರು ಮೃತಪಟ್ಟಿದ್ದು, ಹಲವರಿಗೆ ಗಾಯಗಳುಂಟಾಗಿವೆ. 
ಮೋಹಿತ್ ಪೆಟ್ರೋಕೆಮಿಕಲ್ ಫ್ಯಾಕ್ಟರಿಒಯಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಸೋರುತ್ತಿದ್ದ ಟ್ಯಾಂಕ್ ನ್ನು ಕಾರ್ಮಿಕರು ವೆಲ್ಡ್ ಮಾಡುತ್ತಿದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ. 
ಅಗ್ನಿ ಅವಗಢದ ಪರಿಣಾಮ 9 ಜನರಿಗೆ ಗಾಯಗಳಾಗಿದ್ದು 6 ಜನರು ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಒಳಗೆ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ. ಬಾಲ್ಗೋವಿಂದ್, ರವಿ, ಲೋಕೆಂದ್ರ, ಕಮಲ್ವೀರ್, ವಿಕ್ರಂಟ್ ಮತ್ತು ಚೆಟ್ರಾಮ್ ಮೃತ ದುರ್ದೈವಿಗಳು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com