ಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ  ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ  ಅಂಗವಾಗಿ ಈ  ಆಂದೋಲನವನ್ನು  ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಮತ್ತು ಸ್ವಚ್ಛ ಭಾರತ ನಿರ್ಮಾಣ ಮಾಡಲು ದೃಢ ಸಂಕಲ್ಪ ಮಾಡುವಂತೆ  ನರೇಂದ್ರಮೋದಿ ಸರಣಿ ಟ್ವಿಟ್ ಸಂದೇಶದಲ್ಲಿ ಒತ್ತಾಯಿಸಿದ್ದಾರೆ.

ಅಕ್ಟೋಬರ್ 2 ಮಹಾತ್ಮಗಾಂಧಿ ಅವರ 150 ಜನ್ಮ ದಿನ ವಾರ್ಷಿಕೋತ್ಸವ  ಅಲ್ಲದೇ, ಮಹಾತ್ಮಗಾಂಧಿ ಅವರ  ಸ್ವಚ್ಛ ಭಾರತ ಕನಸು  ಈಡೇರಿಸುವ ನಿಟ್ಟಿನಲ್ಲಿ ಹಾಕಿಕೊಳ್ಳದ ಸ್ವಚ್ಛ ಭಾರತ ಮಿಷನ್ 4 ವರ್ಷ ಪೂರ್ಣಗೊಳಿಸಿದ ದಿನವಾಗಿದ್ದು, ಸ್ವಚ್ಛ ಭಾರತ  ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಎಲ್ಲರಿಗೂ ನಮನ ಸಲ್ಲಿಸುವುದಾಗಿ  ಪ್ರಧಾನಿ ಹೇಳಿದ್ದಾರೆ.

 ಸ್ವಚ್ಚತೆಯೇ ಸೇವೆ ಆಂದೋಲನ  ಸೆಪ್ಟೆಂಬರ್ 15 ರಿಂದ ಆರಂಭವಾಗಲಿದೆ. ಮಹಾತ್ಮ ಗಾಂಧೀಜಿ ಅವರಿಗೆ ನಮನ ಸಲ್ಲಿಸಲು ಇದೊಂದು ದಾರಿಯಾಗಿದ್ದು, ಈ ಆಂದೋಲನದ ಭಾಗವಾಗಿ  ಸ್ವಚ್ಛ ಭಾರತ ನಿರ್ಮಾಣಕ್ಕೆ ದೃಢ ಸಂಕಲ್ಪ ಮಾಡಿ ಎಂದು ಟ್ವಿಟ್ ಸಂದೇಶದಲ್ಲಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com