ನವದೆಹಲಿ: ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಈ ಆಂದೋಲನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಮತ್ತು ಸ್ವಚ್ಛ ಭಾರತ ನಿರ್ಮಾಣ ಮಾಡಲು ದೃಢ ಸಂಕಲ್ಪ ಮಾಡುವಂತೆ ನರೇಂದ್ರಮೋದಿ ಸರಣಿ ಟ್ವಿಟ್ ಸಂದೇಶದಲ್ಲಿ ಒತ್ತಾಯಿಸಿದ್ದಾರೆ.
ಅಕ್ಟೋಬರ್ 2 ಮಹಾತ್ಮಗಾಂಧಿ ಅವರ 150 ಜನ್ಮ ದಿನ ವಾರ್ಷಿಕೋತ್ಸವ ಅಲ್ಲದೇ, ಮಹಾತ್ಮಗಾಂಧಿ ಅವರ ಸ್ವಚ್ಛ ಭಾರತ ಕನಸು ಈಡೇರಿಸುವ ನಿಟ್ಟಿನಲ್ಲಿ ಹಾಕಿಕೊಳ್ಳದ ಸ್ವಚ್ಛ ಭಾರತ ಮಿಷನ್ 4 ವರ್ಷ ಪೂರ್ಣಗೊಳಿಸಿದ ದಿನವಾಗಿದ್ದು, ಸ್ವಚ್ಛ ಭಾರತ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಎಲ್ಲರಿಗೂ ನಮನ ಸಲ್ಲಿಸುವುದಾಗಿ ಪ್ರಧಾನಿ ಹೇಳಿದ್ದಾರೆ.
Advertisement