ಇನ್ನು ಬಾರಾಮುಲ್ಲಾ ಎನ್ ಕೌಂಟರ್ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ತಪ್ಪಿಸಿಕೊಂಡಿದ್ದ ಉಗ್ರರಿಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ರಿಯಾಸಿ ಜಿಲ್ಲೆಯ ಕಕರಿಯಾಲ್ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆಯನ್ನು ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಡಿಎಸ್ಪಿ ಮೋಹನ್ ಲಾಲ್ ಸೇರಿದಂತೆ ಐವರು ಸಿಆರ್ಪಿಎಫ್ ಯೋಧರು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ.