ಚೌತಿಯಂದೇ 4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ

ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ, ಸಿಆರ್​ಪಿಎಫ್​ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೈಷ್​ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಂತೆಯೇ ಗುಂಡಿನ ಚಕಮಕಿಯಲ್ಲಿ 9 ಯೋಧರು ಗಾಯಗೊಂಡಿದ್ದಾರೆ.
ಇನ್ನು ಬಾರಾಮುಲ್ಲಾ ಎನ್ ಕೌಂಟರ್ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ತಪ್ಪಿಸಿಕೊಂಡಿದ್ದ ಉಗ್ರರಿಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ರಿಯಾಸಿ ಜಿಲ್ಲೆಯ ಕಕರಿಯಾಲ್​ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆಯನ್ನು ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಡಿಎಸ್​ಪಿ ಮೋಹನ್​ ಲಾಲ್​ ಸೇರಿದಂತೆ ಐವರು ಸಿಆರ್​ಪಿಎಫ್​ ಯೋಧರು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಇದೀಗ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವಾತ್ಲಾಬ್​ ಸೆಕ್ಟರ್​ನ ಕಮಾಂಡರ್​ ಬ್ರಿಗೇಡಿಯರ್​ ವಿ ಹರಿಹರನ್​ ತಿಳಿಸಿದ್ದಾರೆ.
ವರದಿಗಾಗಿ ತೆರಳಿದ್ದ ಪತ್ರಕರ್ತರ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಸೇನೆ
ಇನ್ನು ರಿಯಾಸಿ ಜಿಲ್ಲೆಯ ಕಕರಿಯಾಲ್​ ಪ್ರದೇಶದಲ್ಲಿ ನಡೆಯುತ್ತಿದ್ದ ಎನ್ ಕೌಂಟರ್ ವರದಿಗೆ ತೆರಳಿದ್ದ ಪತ್ರಕರ್ತರೂ ಕೂಡ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿತ್ತು. ಈ ವೇಳೆ ಸ್ಥಳದಲ್ಲಿದ್ದ ಸೈನಿಕರು ಪತ್ರಕರ್ತರನ್ನು ನೆಲದ ಮೇಲೆ ಮಲಗಿಸಿ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com