ಜಮ್ಮು-ಕಾಶ್ಮೀರ: ನದಿಗೆ ಉರುಳಿ ಬಿದ್ದ ಬಸ್, 12 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ್ದ ವ್ಯಾನ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...
ಜಮ್ಮು-ಕಾಶ್ಮೀರ: ನದಿಗೆ ಉರುಳಿ ಬಿದ್ದ ಬಸ್, 12 ಮಂದಿ ಸಾವು, ಹಲವರಿಗೆ ಗಾಯ
ಜಮ್ಮು-ಕಾಶ್ಮೀರ: ನದಿಗೆ ಉರುಳಿ ಬಿದ್ದ ಬಸ್, 12 ಮಂದಿ ಸಾವು, ಹಲವರಿಗೆ ಗಾಯ
ಕಿಸ್ತಾವರ್: ಜಮ್ಮು ಮತ್ತು ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ್ದ ವ್ಯಾನ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. 
ಕಿಸ್ತಾವರ್'ನಿಂದ 18 ಕಿಮೀ ದೂರದಲ್ಲಿರುವ ಥಕ್ರೈ ತಲುಪಿದಾಗ ವಾಹನದ ಮೇಲಿದ್ದ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾರೆ. ಈ ವೇಳೆ ವ್ಯಾನ್ ನದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. 
ವಾಹನದಲ್ಲಿ 30-35 ಮಂದಿ ಪ್ರಯಾಣಿಕರಿದ್ದರು ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಾಳುಗಳನ್ನು ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದವರಿಗಾಗಿ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com