ಮಲ್ಯ-ಜೇಟ್ಲಿ ವಿವಾದ; ಪ್ರಧಾನಿ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ ಡಿಎಂಕೆ

ವಿಜಯ್ ಮಲ್ಯ ಭಾರತ ಬಿಟ್ಟು ಹೋಗುವ ಮುನ್ನ ಅವರು ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ನಡುವೆ ...
ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್
ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್

ಚೆನ್ನೈ: ವಿಜಯ್ ಮಲ್ಯ ಭಾರತ ಬಿಟ್ಟು ಹೋಗುವ ಮುನ್ನ ಅವರು ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ನಡುವೆ ಏನು ಮಾತುಕತೆ ನಡೆದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಹಿರಂಗಪಡಿಸಬೇಕು ಅಥವಾ ಜೇಟ್ಲಿಯನ್ನು ಸಂಪುಟದಿಂದ ತೆಗೆದುಹಾಕಬೇಕು ಎಂದು ಡಿಎಂಕೆ ಒತ್ತಾಯಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿರುವ ವಿಷಯವನ್ನು ವಿಜಯ್ ಮಲ್ಯ ಅವರೇ ಬಹಿರಂಗಪಡಿಸಿದ್ದು ಇದರಿಂದ ಬಿಜೆಪಿ ಕಾರ್ಪೊರೇಟ್ ಉದ್ಯಮಿಗಳ ಕೈಗೊಂಬೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದರು.

ಇವರಿಬ್ಬರ ನಡುವೆ ಏನು ಮಾತುಕತೆ ನಡೆಯಿತು ಎಂದು ಪ್ರಧಾನಿ ಬಹಿರಂಗಪಡಿಸಬೇಕು, ಇಲ್ಲದಿದ್ದರೆ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com