ಮಣಿಪುರ: ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿ ಮೇಲೆ ಹಲ್ಲೆ; ಐವರ ಬಂಧನ

ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಇಂಪಾಲ್ : ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತೌರೌಯ್ ಜಮ್ ಅವಾಂಗ್  ಲೈಕೈ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪಶ್ಟಿಮ ಇಂಪಾಲ ಪೊಲೀಸ್ ವರಿಷ್ಠಾಧಿಕಾರಿ ಜೊಗೆಶ್ಚಂದ್ರ  ಹೊಬಿಜಮ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಮಾಲೀಕ ಕೂಡಾ ಈ ಪ್ರಕರಣದಲ್ಲಿ ಭಾಗಿಯಾದ ಶಂಕೆಯಿಂದ ಆತನನ್ನು ಕೂಡಾ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಏಕೆ ಆತನನ್ನು ಬಂಧಿಸಲಾಯಿತು ಎಂಬ ಬಗ್ಗೆ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸುತ್ತಿಲ್ಲ.

ಐಪಿಸಿ ಸೆಕ್ಷನ್ ನ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಗರ ನ್ಯಾಯಾಲಯ ಇಂದು  ಒಪ್ಪಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ  ದೂರು ದಾಖಲಿಸಿಕೊಂಡಿದ್ದು, ಸೆಪ್ಟೆಂಬರ್ 22 ರೊಳಗೆ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ  ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com