ಮಣಿಪುರ: ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿ ಮೇಲೆ ಹಲ್ಲೆ; ಐವರ ಬಂಧನ

ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇಂಪಾಲ್ : ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತೌರೌಯ್ ಜಮ್ ಅವಾಂಗ್  ಲೈಕೈ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪಶ್ಟಿಮ ಇಂಪಾಲ ಪೊಲೀಸ್ ವರಿಷ್ಠಾಧಿಕಾರಿ ಜೊಗೆಶ್ಚಂದ್ರ  ಹೊಬಿಜಮ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಮಾಲೀಕ ಕೂಡಾ ಈ ಪ್ರಕರಣದಲ್ಲಿ ಭಾಗಿಯಾದ ಶಂಕೆಯಿಂದ ಆತನನ್ನು ಕೂಡಾ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಏಕೆ ಆತನನ್ನು ಬಂಧಿಸಲಾಯಿತು ಎಂಬ ಬಗ್ಗೆ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸುತ್ತಿಲ್ಲ.

ಐಪಿಸಿ ಸೆಕ್ಷನ್ ನ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಗರ ನ್ಯಾಯಾಲಯ ಇಂದು  ಒಪ್ಪಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ  ದೂರು ದಾಖಲಿಸಿಕೊಂಡಿದ್ದು, ಸೆಪ್ಟೆಂಬರ್ 22 ರೊಳಗೆ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ  ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com