ನವದೆಹಲಿ: ಪ್ರಧಾನಿ ನರೇಂದ್ರಮೋದಿ ಅವರ ನೆಚ್ಚಿನ ಸಿಬಿಐ ಅಧಿಕಾರಿ ದೇಶಭ್ರಷ್ಟ ಮದ್ಯ ಉದ್ಯಮಿ ವಿಜಯ್ ಮಲ್ಯ ವಿರುದ್ಧದ 'ಲುಕ್ ಔಟ್ ನೋಟಿಸ್ ' ದುರ್ಬಲಗೊಳಿಸುವ ಮೂಲಕ ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ.
ಗುಜರಾತ್ ಕೆಡರ್ ಸಿಬಿಐ ಅಧಿಕಾರಿ ಎ. ಕೆ. ಶರ್ಮಾ ಮಲ್ಯ ವಿರುದ್ಧದ ಲುಕ್ ಔಟ್ ನೋಟಿಸ್ ದುರ್ಬಲಗೊಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಸಂದೇಶ ಹಾಕಿದ್ದಾರೆ.
Advertisement