ಪೆರಿಯಾರ್ ಪ್ರತಿಮೆ ಧ್ವಂಸ, ತಲೆ ಮೇಲೆ ಚಪ್ಪಲಿ ಇಟ್ಟ ದುಷ್ಕರ್ಮಿಗಳು

ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಲ್ಲದೆ...
ಪೆರಿಯಾರ್ ಪ್ರತಿಮೆ
ಪೆರಿಯಾರ್ ಪ್ರತಿಮೆ
Updated on
ಚೆನ್ನೈ: ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಲ್ಲದೆ ಅವರ ತಲೆ ಮೇಲೆ ಚಪ್ಪಲಿ ಇಟ್ಟು ವಿಕೃತಿ ಮೆರೆದಿರುವ ಘಟನೆ ಚೆನ್ನೈ ಮತ್ತು ತಿರುಪುರದಲ್ಲಿ ನಡೆದಿದೆ.
ಚೆನ್ನೈನ ಅಣ್ಣಾ ಸಲೈಯಲ್ಲಿರುವ ಪೆರಿಯಾರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಂತಕ, ಸಾಮಾಜಿಕ ಹೋರಾಟಗಾರ ಪೆರಿಯಾರ್ ಅವರ 140ನೇ ಜನ್ಮದಿನದಂದೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ವಿವಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಅವರ ಬೆಂಬಲಿಗರು ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬಂದಾಗ ದುಷ್ಕರ್ಮಿಗಳನ್ನು ಹಿಡಿಯಲು ಯತ್ನಿಸಿದ್ದಾರೆ. 
ತಪ್ಪಿಸಿಕೊಂಡಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದು, ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com