ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಮೂರು ದಿನಗಳ ಉಪನ್ಯಾಸ ಸರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಭಾಗ್ವತ್ ಅವರು, 'ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು. 'ಕಾಂಗ್ರೆಸ್ನ ರೂಪದಲ್ಲಿ ದೇಶದಲ್ಲಿ ಬಲುದೊಡ್ಡ ಸ್ವಾತಂತ್ರ್ಯ ಸಂಗ್ರಾಮ ಆರಂಭಗೊಂಡಿತ್ತು. ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾತ್ಮರು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದು, ಇದು ನಮಗೆ ಸ್ಫೂರ್ತಿದಾಯಕ. ಇಂತಹ ಮಹಾತ್ಮರು ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗುವಂತೆ ಮಾಡಲು ಪ್ರೇರಣೆಯಾಗಿದ್ದರು. ಇದರಲ್ಲಿ ಕಾಂಗ್ರೆಸ್ ನ ದೊಡ್ಡ ಕೊಡುಗೆಯಿದೆ. ಕಾಂಗ್ರೆಸ್ ದೇಶಕ್ಕೆ ಮಹೋನ್ನತ ನಾಯಕರನ್ನು ನೀಡಿದೆ' ಎಂದು ಭಾಗವತ್ ಹೇಳಿದ್ದಾರೆ.