2013ರಲ್ಲಿ ವೆಚ್ಚ ಸಮಾಲೋಚನಾ ಸಮಿತಿಯು ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಅಂತಿಮ ರೂಪ ನೀಡುತ್ತಿರುವಾಗ ಅಂದಿನ ರಕ್ಷಣಾ ಸಚಿವ ಎ. ಕೆ. ಆಂಟನಿ ಅವರ ಅತಿಯಾದ ಹಸ್ತಕ್ಷೇಪವೂ ಎಚ್ ಎಎಲ್ ಜೊತೆಗಿನ ಒಪ್ಪಂದ ರದ್ದಾಗಲು ಕಾರಣ ಎಂದು ಈ ಹಿಂದೆ ಸೀತಾರಾಮನ್ ಆರೋಪಿಸಿದ್ದರು. ಸೀತಾರಾಮನ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಆಂಟನಿ, ರಕ್ಷಣಾ ಸಚಿವರು ಸತ್ಯ ಮರೆಮಾಚುತ್ತಿದ್ದಾರೆ ಎಂದಿದ್ದಾರೆ.